ರಂಜಾನ್ ಪ್ರಯುಕ್ತ ಕದನ ವಿರಾಮ ಕಾಯ್ದುಕೊಳ್ಳುವಂತೆ ಭದ್ರತಾ ಪಡೆಗಳಿಗೆ ಕೇಂದ್ರ ಸರ್ಕಾರ ಆದೇಶ ನೀಡಿದ್ದನ್ನೇ ತಮ್ಮ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಮುಂದಾಗಿದ್ದ ಪಾಕಿಸ್ತಾನ, ಗಡಿಯಲ್ಲಿ ಉದ್ಧಟತವನ್ನು ಪ್ರದರ್ಶಿಸಿತ್ತು. ಪಾಕಿಸ್ತಾನ ಈ ಉದ್ಧಟತನಕ್ಕೆ ದಿಟ್ಟ ಉತ್ತರ ನೀಡಿದ್ದ ಗಡಿ ಭದ್ರತಾ ಪಡೆಗಳು ಅಂತರಾಷ್ಟ್ರೀಯ ಗಡಿಯಲ್ಲಿದ್ದ ಪಾಕಿಸ್ತಾನ ಸೇನಾ ಬಂಕರ್ ಗಳನ್ನು ಧ್ವಂಸಗೊಳಿಸಿತ್ತು.