ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಚುನಾವಣೆಯಲ್ಲಿ ದೊಡ್ಡ ಮಟ್ಟದ ಹಣ ಹಂಚಿಕೆಗೆ ಯತ್ನಿಸಿತು. ನಕಲಿ ವೋಟರ್ ಐಡಿ ಕಾರ್ಡ್ ಗಳನ್ನು ಜಪ್ತಿ ಮಾಡಲಾಗಿದೆ. ಇಷ್ಟೇಲ್ಲಾ ಮಾಡಿದರೂ ಜನಾದೇಶ ಬಿಜೆಪಿ ಪರವಾಗಿ ಬಂದಿದೆ. ಜನಾದೇಶಕ್ಕೆ ವಿರುದ್ಧವಾಗಿ ಕಾಂಗ್ರೆಸ್, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.