2019 ರಲ್ಲಿ ನಾವು ಹೊಸ ಸರ್ಕಾರವನ್ನು ಪಡೆಯಲಿದ್ದೇವೆ, ನಮ್ಮ ದೇಶಕ್ಕಾಗಿ ಪ್ರಾರ್ಥನೆ ಸಲ್ಲಿಸೋಣ ಎಂದು ಪತ್ರದಲ್ಲಿ ಆರ್ಚ್ ಬಿಷಪ್ ಕರೆ ನೀಡಿದ್ದಾರೆ. ಈ ಬಗ್ಗೆ ಬಿಷಪ್ ಅವರ ಕಾರ್ಯದರ್ಶಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು ಪ್ರತಿ ಚುನಾವಣೆಯಲ್ಲಿಯೂ ದೇಶಕ್ಕಾಗಿ ಪ್ರಾರ್ಥನೆ ಮಾಡುವ ಪರಿಪಾಠ ಹೊಂದಿದ್ದೇವೆ, ಆದರೆ ಈ ಬಾರಿ ಅದನ್ನು ರಾಜಕೀಯಗೊಳಿಸಲಾಗುತ್ತಿದೆಯಷ್ಟೇ ಎಂದು ಹೇಳಿದ್ದಾರೆ.