ಕೇಂದ್ರ ಮಾಜಿ ಸಚಿವ ಬಂಡಾರು ದತ್ತಾತ್ರೇಯ ಪುತ್ರ ಹೃದಯಾಘಾತದಿಂದ ನಿಧನ

ಕೇಂದ್ರದ ಮಾಜಿ ಸಚಿವ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಂಡಾರು ದತ್ತಾತ್ರೇಯ ಅವರ ಪುತ್ರ ವೈಷ್ಣವ್ (21) ಅವರು ಹೃದಯಾಘಾತದಿಂದ ಬುಧವಾರ ನಿಧನಹೊಂದಿದ್ದಾರೆ...
ಕೇಂದ್ರ ಮಾಜಿ ಸಚಿವ ಬಂಡಾರು ದತ್ತಾತ್ರೇಯ ಹಾಗೂ ಅವರ ಪುತ್ರ ವೈಷ್ಣವ್
ಕೇಂದ್ರ ಮಾಜಿ ಸಚಿವ ಬಂಡಾರು ದತ್ತಾತ್ರೇಯ ಹಾಗೂ ಅವರ ಪುತ್ರ ವೈಷ್ಣವ್
Updated on
ಹೈದರಾಬಾದ್; ಕೇಂದ್ರದ ಮಾಜಿ ಸಚಿವ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಂಡಾರು ದತ್ತಾತ್ರೇಯ ಅವರ ಪುತ್ರ ವೈಷ್ಣವ್ (21) ಅವರು ಹೃದಯಾಘಾತದಿಂದ ಬುಧವಾರ ನಿಧನಹೊಂದಿದ್ದಾರೆ. 
ಕಳೆದ ರಾತ್ರಿ ಅತೀವ್ರ ಎದೆನೋವಿನಿಂದ ಬಳಲುತ್ತಿದ್ದ ವೈಷ್ಣವ್ ಅವರನ್ನು ಸಿಖಂದರಾಬಾದಿನ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವೈಷ್ಣವ್ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 
ವೈಷ್ಣವ್ ಅವರು ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು. ವೈಷ್ಣವ್ ಅವರ ಅಕಾಲಿಕ ಮರಣ ಹಿನ್ನಲೆಯಲ್ಲಿ ಬಂಡಾರು ದತ್ತಾತ್ರೇಯ ಮನೆಯಲ್ಲಿ ನೀರವ ಮೌನ, ದುಃಖ ಮಡುಗಟ್ಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com