ನವದೆಹಲಿ: 2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿರುವುದು ಇಡೀ ದೇಶಕ್ಕೆ ನಾಚಿಕೆಗೇಡಿನ ಸಂಗತಿ ಮತ್ತು ಇದೊಂದು ಸ್ಮಾರಕ ಹಾನಿ ಪ್ರಕರಣ ಎಂದು ಸಿಬಿಐ ದೆಹಲಿ ಹೈಕೋರ್ಟ್ ಗೆ ಶುಕ್ರವಾರ ಹೇಳಿದೆ.
ಟೆಲಿಕಾಂ ಮಾಜಿ ಸಚಿವ ಎ ರಾಜಾ ಹಾಗೂ ಡಿಎಂಕೆ ಸಂಸದೆ ಕನಿಮೋಳಿ ಸೇರಿದಂತೆ ಇತರೆ ಆರೋಪಿಗಳ ಖುಲಾಸೆ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಎಲ್ಲಾ ಆರೋಪಿಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
2ಜಿ ತರಂಗಾಂತರ ಅಕ್ರಮ ಹಂಚಿಕೆಯಿಂದ ಸಾರ್ವಜನಿಕರ ಖಜಾನೆಗೆ ದೊಡ್ಡ ನಷ್ಟವಾಗಿದೆ ಎಂದು ಸಿಬಿಐ ವಾದಿಸಿದೆ.
ಈ ವೇಳೆ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಬೇಕು ಎಂಬ ಆರೋಪಿಗಳ ಮನವಿಗೂ ಸಿಬಿಐ ವಿರೋಧ ವ್ಯಕ್ತಪಡಿಸಿದೆ.
ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಸ್ ಜಿ ಗರ್ಗ್ ಅವರು ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದ್ದಾರೆ.