ಕುಟುಂಬ ರಾಜಕಾರಣದಲ್ಲಿ ಬೆಂದಿದ್ದ ದೇಶ, ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ. ಎಲ್ಲ ವಿಭಾಗದಲ್ಲೂ ಅಗ್ರ ಪಂಕ್ತಿ ಕಾಯ್ದುಕೊಳ್ಳುತ್ತಿದೆ. ಮೂಲಸೌಕರ್ಯಗಳಿಗೂ ಕೈಚಾಚುವ ಕಾಲ ದೂರವಾಗಿ ಸರ್ಕಾರದ ಪ್ರತಿ ಸೌಲಭ್ಯಗಳು ಬಡವರ ಮನೆ ಬಾಗಿಲಿಗೆ ಬರುವಂತಾಗಿದೆ. ದೇಶ ಇಂದು ಕಾಳಧನದಿಂದ ಜನಧನ್ ಗೆ ಪರಿವರ್ತನೆಯಾಗುತ್ತಿದೆ. ಕೆಟ್ಟ ಆಡಳಿತ ವ್ಯವಸ್ಥೆಯಿಂದ ಅತ್ಯುತ್ತಮ ವ್ಯವಸ್ಥೆಗೆ ಪರಿವರ್ತನೆ ಕಾಣುತ್ತಿದೆ ಎಂದರು.