ಹನುಮಂತ ಜಗತ್ತಿನ ಮೊದಲ ಆದಿವಾಸಿ: ಬಿಜೆಪಿ ಶಾಸಕ

ಭಗವಂತ ಹನುಮಂತ ಜಗತ್ತಿನ ಮೊದಲ ಆದಿವಾಸಿ ಎಂದು ಹೇಳುವ ಮೂಲಕ ರಾಜಸ್ತಾನ ಅಲ್ವಾರ್ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ವಿವಾದ ಸೃಷ್ಟಿಸಿದ್ದಾರೆ...
ಜ್ಞಾನ್ ದೇವ್ ಅಹುಜಾ
ಜ್ಞಾನ್ ದೇವ್ ಅಹುಜಾ
Updated on
ಜೈಪುರ: ಭಗವಂತ ಹನುಮಂತ ಜಗತ್ತಿನ ಮೊದಲ ಆದಿವಾಸಿ ಎಂದು ಹೇಳುವ ಮೂಲಕ ರಾಜಸ್ತಾನ ಅಲ್ವಾರ್ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ವಿವಾದ ಸೃಷ್ಟಿಸಿದ್ದಾರೆ. 
ಆದಿವಾಸಿಗಳನ್ನು ಒಳಗೊಂಡ ಸೈನ್ಯವನ್ನು ಹನುಮಂತ ಕಟ್ಟಿದ್ದು ಅದಕ್ಕೆ ಭಗವಂತ ಶ್ರೀರಾಮ ತರಬೇತಿ ನೀಡಿದ ನಂತರ ದೇಶದ ಬುಡಕಟ್ಟು ಜನರು ಹನುಮಂತನನ್ನು ಆರಾಧ್ಯ ದೈವವಾಗಿ ಪೂಜಿಸಲು ಆರಂಭಿಸಿದರು ಎಂದು ನಾನು ನಂಬುತ್ತೇನೆ. ಇನ್ನು ಏಪ್ರಿಲ್ 2ರಂದು ನಡೆದ ಭಾರತ ಬಂದ್ ಪ್ರತಿಭಟನೆ ವೇಳೆ ಹನುಮಂತನ ಭಾವಚಿತ್ರವನ್ನು ಬಳಸಿ ಅವಮಾನ ಮಾಡಲಾಗಿದೆ ಎಂದು ಹೇಳಿದರು.
ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಬುಡಕಟ್ಟು ಜನಾಂಗದ ವ್ಯಕ್ತಿಯಾಗಿ, ಹನುಮಂತನ ವಿರುದ್ಧ ಅಗೌರವ ತೋರಿದ್ದಾರೆ. ಹೀಗಾಗಿ, ತಾನು ಅವರ ಜತೆ ಮಾತನಾಡಿದ್ದೇನೆ ಎಂದು ಪಕ್ಷದ ಕಚೇರಿಯಲ್ಲಿ ಮಾಧ್ಯಮಕ್ಕೆ ಅಹುಜಾ ಹೇಳಿದ್ದಾರೆ. ಬುಡಕಟ್ಟು ಜನಾಂಗದ ಮೊದಲ ದೇವರು ಹಾಗೂ ಹಿಂದೂವಿನ ದೇವರು ಹನುಮಾನ್ ಜೀ. ಆದರೂ ಬಿಜೆಪಿ ಸಂಸದ ಯಾಕೆ ಅಗೌರವ ತೋರಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇದು ದುರದೃಷ್ಟಕರ ಎಂದು ಅಹುಜಾ ಹೇಳಿದ್ದಾರೆ.
ಈ ಹಿಂದೆ ಅಹುಜಾ, ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಪ್ರತಿನಿತ್ಯ 5 ಸಾವಿರ ಎಲುಬಿನ ತುಂಡುಗಳು, ಬಳಸಿದ 3 ಸಾವಿರ ಕಾಂಡೋಮ್ ಗಳು, ಗರ್ಭಪಾತ ಮಾಡಲು ಬಳಸಿದ 500 ಚುಚ್ಚುಮದ್ದುಗಳು, 10 ಸಾವಿರ ಸಿಗರೆಟ್ ಗಳು ಕಾಣಸಿಗುತ್ತವೆ ಎಂದು ಹೇಳಿಕೆ ನೀಡಿದ್ದು ಇದು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com