ಕೇಂದ್ರ ಸಚಿವರಿಂದ 'ವೈಯಕ್ತಿಕ ಟಾರ್ಗೆಟ್': ಒಡಿಶಾ ಐಎಎಸ್ ಅಧಿಕಾರಿಗಳ ಸಂಘ ಆರೋಪ

ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹಿರಿಯ ಅಧಿಕಾರಿಗಳನ್ನು 'ವೈಯಕ್ತಿಕ ಟಾರ್ಗೆಟ್' ಮಾಡುತ್ತಿದ್ದಾರೆ....
ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
ನವದೆಹಲಿ: ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹಿರಿಯ ಅಧಿಕಾರಿಗಳನ್ನು 'ವೈಯಕ್ತಿಕ ಟಾರ್ಗೆಟ್' ಮಾಡುತ್ತಿದ್ದಾರೆ ಎಂದು ಒಡಿಶಾ ಐಎಎಸ್ ಅಧಿಕಾರಿಗಳ ಸಂಘ ಮಂಗಳವಾರ ಆರೋಪಿಸಿದೆ.
ಈ ಸಂಬಂಧ ಐಎಎಸ್ ಅಧಿಕಾರಿಗಳ ಸಂಘ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಮನವಿ ಸಲ್ಲಿಸಿದ್ದು, ಘಟನೆ ಮತ್ತೆ ಮರುಕಳುಹಿಸದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದೆ.
ಇತ್ತೀಚಿಗೆ ರಾಜ್ಯ ಮತ್ತು ದೇಶದ ಇತರೆ ಭಾಗಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಮೇಲೆ ರಾಜಕಾರಣಿಗಳು ವೈಯಕ್ತಿಕ ದಾಳಿ ನಡೆಸುವ ಮೂಲಕ ಸಂವಿಧಾನಿಕ ಮೌಲ್ಯಗಳನ್ನು ಹಾಳು ಮಾಡುತ್ತಿದ್ದಾರೆ ಎಂದು ಅಧಿಕಾರಿಗಳ ಆರೋಪಿಸಿದೆ.
ಉದಾಹರಣೆಗೆ, ಮೇ 28ರಂದು ಭುವನೇಶ್ವರದಲ್ಲಿ ಎನ್ಐಸಿ ರಾಷ್ಟ್ರೀಯ ದತ್ತಾಂಶ ಕೇಂದ್ರ ಉದ್ಘಾಟನೆ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಿದ್ದರು ಎಂದು ಸಂಘ ದೂರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com