ಈಗಾಗಲೇ ಮಂಜೂರು ಮಾಡಲಾಗಿದ್ದ ಭೂಮಿಯನ್ನು ತಮಿಳುನಾಡು ಸರ್ಕಾರ ವಾಪಸ್ ಪಡೆದಿದ್ದು, ಆದೇಶದ ಪ್ರತಿಯನ್ನು ರಾಜ್ಯ ಕೈಗಾರಿಕಾ ಉತ್ತೇಜನ ನಿಗಮಕ್ಕೆ ಕಳಿಸಲಾಗಿದೆ. ತಾಮ್ರ ಸ್ಮೆಲ್ಟರ್ ಘಟಕದ ವಿರುದ್ಧ ಸರಣಿ ಪ್ರತಿಭಟನೆಗಳು ನಡೆದಿವೆ. ಸ್ಥಳೀಯರು ಈ ಕೈಗಾರಿಕೆಯಿಂದ ತಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಘಟಕ ವಿಸ್ತರಣೆಗೆ ನೀಡಲಾಗಿದ್ದ ಭೂಮಿಯನ್ನು ವಾಪಸ್ ಪಡೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.