ಸ್ಟೆರ್ಲೈಟ್ ದುರಂತ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ರಜನಿಕಾಂತ್

ಮಿಳುನಾಡಿನ ತೂತುಕುಡಿ ಜಿಲ್ಲೆ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ.......
ರಜನಿಕಾಂತ್
ರಜನಿಕಾಂತ್
Updated on
ತೂತುಕುಡಿ(ತಮಿಳುನಾಡು): ತಮಿಳುನಾಡಿನ ತೂತುಕುಡಿ ಜಿಲ್ಲೆ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಪರ್ ಸ್ಟಾರ್ ರಜನಿಕಾಂತ್ ತಲಾ  2 ಲಕ್ಷ ರೂ ಪರಿಹಾರವನ್ನು ಘೋಷಿಸಿದ್ದಾರೆ.
ನಟ, ರಾಜಕಾರಣಿ ರಜನಿಕಾಂತ್ ಬುಧವಾರ ತೂತುಕುಡಿ ಘಟನೆಯ ಗಾಯಾಳುಗಳನ್ನು ಜನರಲ್ ಆಸ್ಪತ್ರೆಯಲ್ಲಿ ಭೇಟಿಯಾದರು.
ಕಾನೂನು ಸುವ್ಯವಸ್ಥೆ  ನಿರ್ಲಕ್ಷದ ಕಾರಣ ಈ ದುರಂತ ಸಂಭವಿಸಿದೆ ಎಂದ ರಜನಿಕಾಂತ್ ", ಈ ಘಟನೆಯು ಸರ್ಕಾರದ ನಿರ್ಲಕ್ಷ್ಯವನ್ನು ತೋರುತ್ತದೆ. ನಾನು ಈ ಕುರಿತಂತೆ ಹೆಚ್ಚು ಮಾತನಾಡುವುದಿಲ್ಲ. ಆದರೆ ಸರ್ಕಾರ ಜಾಗರೂಕವಾಗಿರಬೇಕು  ಈ ಘಟನೆ ಒಂದು ದೊಡ್ಡ ಪಾಠವಾಗಿದೆ.ನಾನು ಘಟನೆಯಲ್ಲಿ ನಾವನ್ನಪ್ಪಿದ ಕುಟುಂಬಕ್ಕೆ ತಲಾ  2 ಲಕ್ಷ ರೂ. ಪರಿಹಾರ ನೀಡುತ್ತೇನೆ" ಎಂದರು.
ಮೇ.22 ರಂದು ತೂತುಕುಡಿಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ರೈತರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ನಡೆದ ಪೊಲೀಸ್‌ ಗೋಲಿಬಾರ್ ನಲ್ಲಿ 13 ಮಂದಿ ಮೃತಪಟ್ಟಿದ್ದರು. ತಾಮ್ರ ಘಟಕದಿಂದ ಅಂತರ್ಜಲ ಮಲಿನವಾಗುತ್ತಿದೆ, ಪರ್ಸರಕ್ಕೆ ಹಾನಿಯಾಗುತ್ತಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com