ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಭಾರತೀಯ ಕಿಶನ್ ಯೂನಿಯನ್ (ಬಿಕೆಯು) ಪಂಜಾಬ್ ಘಟಕದ ಅಧ್ಯಕ್ಷ ದಲ್ಬೀರ್ ಸಿಂಗ್ ರಾಜೇವಾಲ್ ಅವರು, ಈ ನಿರ್ಧಾರವನ್ನು ರೈತರ ಸಂಘ ಮತ್ತು ಎಲ್ಲಾ ರಾಜ್ಯಗಳ ಒಕ್ಕೂಟಗಳು ತೆಗೆದುಕೊಂಡಿದ್ದು, ಏರಿಕೆಯಾಗುತ್ತಿರುವ ಕೃಷಿ ಬೆಲೆ ದರಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಏನೂ ಮಾಡುತ್ತಿಲ್ಲ, ಹೀಗಾಗಿ ಈಗ ರೈತರಿಗೆ ಯಾವುದೇ ಆಯ್ಕೆಯಿಲ್ಲ. ಡೀಸೆಲ್ ಬೆಲೆಗಳು ನಿರಂತರವಾಗಿ ಹದಿನಾರು ದಿನಗಳಿಂದ ಏರಿಕೆಯಾಗುತ್ತಲೆ ಇದೆ. ರೈತರು ತಮ್ಮ ಕ್ಷೇತ್ರಗಳನ್ನು ನೀರಾವರಿ ಮಾಡಲು ಟ್ರಾಕ್ಟರುಗಳು ಮತ್ತು ಡೀಸೆಲ್ ಜನರೇಟರ್ಗಳನ್ನು ಬಳಸುತ್ತಾರೆ, ಹೀಗಾಗಿ ತಮ್ಮ ಉತ್ಪಾದನಾ ವೆಚ್ಚ ಮತ್ತಷ್ಟು ಹೆಚ್ಚಳವಾಗಿದೆ ಎಂದರು.