ನವದೆಹಲಿ: ಕಳೆದ ಮೇ 28ರಂದು ದೇಶದ ನಾಲ್ಕು ಲೋಕಸಭಾ ಕ್ಷೇತ್ರಗಳು ಮತ್ತು 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿಗೆ ತೀವ್ರ ಹಿನ್ನಡೆ ಉಂಟಾಗಿದೆ.
2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಉಪಚುನಾವಣೆಯಲ್ಲಿ ಕೇಸರಿಪಡೆಯನ್ನು ಕಟ್ಟಿಹಾಕುವಲ್ಲಿ ವಿರೋಧಪಕ್ಷಗಳು ಯಶಸ್ವಿಯಾಗಿವೆ.