ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಪುತ್ರ ಕಾರ್ತಿಗೆ ನ.26 ವರೆಗೂ ರಿಲೀಫ್!
ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಪುತ್ರ ಕಾರ್ತಿಗೆ ನ.26 ವರೆಗೂ ರಿಲೀಫ್!

ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಪುತ್ರ ಕಾರ್ತಿಗೆ ನ.26 ವರೆಗೂ ರಿಲೀಫ್!

ಏರ್ ಸೆಲ್ ಮ್ಯಾಕ್ಸಿಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಗೆ ನ.06 ವರೆಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.
ನವದೆಹಲಿ: ಏರ್ ಸೆಲ್ ಮ್ಯಾಕ್ಸಿಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಗೆ ನ.06 ವರೆಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. 
ದೆಹಲಿ ಕೋರ್ಟ್ ನ.1 ರಂದು ಇಬ್ಬರೂ ಆರೋಪಿಗಳ ಮಧ್ಯಂತರ ರಕ್ಷಣೆಯನ್ನು ನ.26 ರವರೆಗೆ ವಿಸ್ತರಿಸಿದ್ದು, ಅದೇ ದಿನಾಂಕಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ. ಅ.08 ರಂದು ನ.1 ರವರೆಗೆ ಮಧ್ಯಂತರ ರಕ್ಷಣೆಯನ್ನು ವಿಸ್ತರಿಸಿತ್ತು. ಅ.31  ರಂದು ಜಾರಿ ನಿರ್ದೇಶನಾಲಯ ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿತ್ತು. 
ಏರ್ ​ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 25ರಂದು  ಜಾರಿ ನಿರ್ದೇಶನಾಲಯ ಚಿದಂಬರಂ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ದಾಖಲಿಸಿತ್ತು.

Related Stories

No stories found.

Advertisement

X
Kannada Prabha
www.kannadaprabha.com