2019 ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ರೈತರು ಕ್ಷಮಿಸಬಾರದು- ಯಶವಂತ್ ಸಿನ್ಹಾ

2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜನರು ಕ್ಷಮಿಸಬಾರದು, ಎನ್ ಡಿಎ ಸರ್ಕಾರವನ್ನು ಕಿತ್ತು ಹಾಕಬೇಕೆಂದು ಕರೆ ನೀಡಿದ್ದಾರೆ.
ನರೇಂದ್ರ ಮೋದಿ, ಯಶವಂತ ಸಿನ್ಹಾ
ನರೇಂದ್ರ ಮೋದಿ, ಯಶವಂತ ಸಿನ್ಹಾ
Updated on

ಗುಜರಾತ್ : 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜನರು ಕ್ಷಮಿಸಬಾರದು, ಎನ್ ಡಿಎ ಸರ್ಕಾರವನ್ನು ಕಿತ್ತು ಹಾಕಬೇಕೆಂದು  ಕರೆ ನೀಡಿದ್ದಾರೆ.

ಗುಜರಾತಿನ ಜುನಾಗಡ ಜಿಲ್ಲೆಯ ವಾಂತಾಲಿ ಬಳಿ ರೈತರನ್ನುದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ರಂಗಗಳಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ರೈತರು, ಯುವಕರು, ಮಹಿಳೆಯರು,ದಲಿತರು ಎಲ್ಲರೂ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರದಲ್ಲಿ ಕೇವಲ ಹೊಸ ಘೋಷಣೆಗಳನ್ನು ಮಾತ್ರ ನೀಡಲಾಗುತ್ತಿದೆ.ಯಾರಿಗೂ ಅನುಕೂಲ ಮಾಡದ ಸರ್ಕಾರವನ್ನು  ಮುಂದಿನ ಚುನಾವಣೆಯಲ್ಲಿ ಸೋಲಿಸುವುದರಿಂದ ಎಲ್ಲಾದಕ್ಕೂ ಪರಿಹಾರ ದೊರೆಯಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com