ಚೆನ್ನೈ: ಕಪ್ಪುಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಕುಟುಂಬ ಸದಸ್ಯರ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ಕಪ್ಪು ಹಣ ಕಾಯಿದೆ ಅನ್ವಯ ಹಾಗೂ ವಿದೇಶದಲ್ಲಿ ಆಸ್ತಿ ಹೊಂದಿರುವ ಸಂಬಂಧ ಚಿದಂಬರಂ ಕುಟುಂಬ ಸದಸ್ಯರ ವಿರುದ್ಧ ಆದಾಯ ತೆರಿಗೆ ಇಲಾಖೆ ಕೇಸ್ ದಾಖಲಿಸಿತ್ತು.
ನ್ಯಾಯಮೂರ್ತಿ ಎಸ್ ಮಣಿಕುಮಾರ್ ಮತ್ತು ಜಸ್ಟೀಸ್ ಸುಬ್ರಮಣಿಯಮ್ ಪ್ರಸಾದ್ ಅವರನ್ನೊಳಗೊಂಡ ವಿಭಾಗೀಯ ಪೀಠ ವಜಾಗೊಳಿಸಿದೆ.
ಚಿದಂಬರಂ ಪತ್ನಿ ನಳಿನಿ, ಪುತ್ರ ಕಾರ್ತಿ ಚಿದಂಬರಂ ಹಾಗೂ ಸೊಸೆ ಶ್ರೀನಿಧಿ ತಮ್ಮ ವಿರುದ್ಧದ ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ ವಜಾಗೊಳಿಸಿದೆ. ಜೊತೆಗೆ ಅವರ ವಿರುದ್ಧ ದಾಖಲಿಸಿದ್ದ ಖಾಸಗಿ ದೂರುಗಳನ್ನು ಕೂಡ ರದ್ದುಗೊಳಿಸಿದೆ.
ವಿದೇಶಿ ಆಸ್ತಿಗಳ ವಿವರ ಬಹಿರಂಗ ಗೊಳಿಸದ ಕಾರಣ ಚಿದಂಬರಂ ಕುಟುಂಬಸ್ಥರ ವಿರುದ್ಧ ಐಟಿ ಇಲಾಖೆ ದೂರು ದಾಖಲಿಸಿತ್ತು.
Advertisement