ಅಂತೆಯೇ ಡಸ್ಸಾಲ್ಟ್ ಸಂಸ್ಥೆ ಭಾರತದಲ್ಲಿ ನಷ್ಟದಲ್ಲಿರುವ ಸಂಸ್ಥೆಯೊಂದಿಗೆ ಏಕೆ ಕೈ ಜೋಡಿಸಿತು ಎನ್ನುವುದು ಯಕ್ಷ ಪ್ರಶ್ನೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ನೇರ ಕೈವಾಡ ಇದರಲ್ಲಿ ಇದೆ ಎಂಬುದು ಇದರಿಂದಲೇ ಸಾಬೀತಾಗುತ್ತದೆ. ಡಸ್ಸಾಲ್ಟ್ ಏವಿಯೇಷನ್ ಸಿಇಒ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಕ್ಷಣೆ ಮಾಡಲು ಸುಳ್ಳು ಹೇಳುತ್ತಿದ್ದಾರೆ. ಆದರೆ ರಾಫೆಲ್ ಜೆಟ್ ಖರೀದಿ ಹಗರಣದ ತನಿಖಾ ವರದಿ ಬಹಿರಂಗವಾದರೆ ಪ್ರಧಾನಿ ಮೋದಿ ಅವರ ಅಸ್ತಿತ್ವ ಅಲುಗಾಡುತ್ತದೆ. ಆದರೆ ಇದು ಸಾಧ್ಯವಾಗುತ್ತಿಲ್ಲ. ಕಾರಣ ಪ್ರಧಾನಿ ಮೋದಿ ಈ ದೇಶದ ನಿರ್ಣಯಕಾರರಾಗಿದ್ದಾರೆ, ಭ್ರಷ್ಟಾಚಾರ ಈ ಹಗರಣ ಮುಚ್ಚಿ ಹೋಗಲು ಕಾರಣ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.