ಗುಜರಾತ್ ನಲ್ಲಿ ಉಕ್ಕಿನ ಮನುಷ್ಯ ಖ್ಯಾತಿಯ ಸರ್ದಾರ್ ವಲ್ಲಭಾಯ್ ಪಟೇಲರ ಪ್ರತಿಮೆ ಪ್ರತಿಷ್ಠಾಪನೆಯಂತೆ ಉತ್ತರಪ್ರದೇಶದಲ್ಲಿ 100 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿಂತನೆ ನಡೆಸಿದ್ದಾರೆ.
ಅಯೋಧ್ಯೆ ರಾಮ ಜನ್ಮಭೂಮಿ ಒಡೆತನದ ವಿವಾದದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 2019ರ ಜನವರಿಗೆ ಮುಂದೂಡಿದ ಎರಡೇ ದಿನಗಳ ತರುವಾಯ ಪಾಂಡೆ ಈ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ.
ಅಯೋಧ್ಯೆಗೆ ಸಂಬಂಧಿಸಿದಂತೆ ಈ ದೀಪಾವಳಿಗೆ ನೀವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಕೆಲವು ಮಹತ್ವದ ಪ್ರಕಟನೆಗಳನ್ನು ಕೇಳಬಹುದಾಗಿದೆ ಎಂದು ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ ಮಹೇಂದ್ರನಾಥ್ ಪಾಂಡೆ ಹೇಳಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ ಪಾಂಡೆ, ಅದನ್ನು ಮಹಾನ್ ಸಂತ, ಯೋಗಿ ಆದಿತ್ಯನಾಥ್ ಅವರೇ ಪ್ರಕಟಿಸುವುದು ಸೂಕ್ತ ಎಂದು ಹೇಳಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಅವರು ಶಾಂತಿ ಮತ್ತು ಸಹೋದರತೆಗಾಗಿ ಅಯೋಧ್ಯೆ ವಿವಾದವನ್ನು ಕ್ಲಪ್ತವಾಗಿ ಇತ್ಯರ್ಥಪಡಿಸುವ ಅಗತ್ಯವಿದೆ ಎಂದು ಹೇಳಿದ್ದರು.
भारत की एकता और अखंडता के प्रतीक 'भारत रत्न' ‘लौह पुरुष’ सरदार वल्लभ भाई पटेल जी को समर्पित 'स्टैच्यू ऑफ यूनिटी' के भव्य स्मारक के प्रांगण से कुछ अविस्मरणीय पल। pic.twitter.com/KdLb7xXbT1