ಇಂದು ನೇರವಾಗಿ ವಿದ್ಯಾರ್ಥಿನಿಯ ಮನೆಗೆ ತೆರಳಿದ್ದ ಶಂಕರ್ ಕೊನೆಯ ಬಾರಿಗೆ ಆಕೆಯಲ್ಲಿ ತನ್ನ ಪ್ರೇಮ ನಿವೇದನೆ ಮಾಡಿದ್ದಾನೆ. ಅದಕ್ಕೂ ಆಕೆ ಒಪ್ಪದಿದ್ದಾಗ ಆಕ್ರೋಶಗೊಂಡ ಆತ ತಾನು ತಂದಿದ್ದ ಚಾಕುವಿನಿಂದ ಆಕೆಯ ಕತ್ತು ಸೀಳಿದ್ದಾನೆ. ಬಳಿಕ ತನ್ನ ಕತ್ತನ್ನೂ ಕೂಡ ಸೀಳಿಕೊಂಡಿದ್ದಾನೆ. ಈ ವೇಳೆ ವಿದ್ಯಾರ್ಥಿನಿಯ ಆಕ್ರಂಧನ ಕೇಳಿದ ಸ್ಥಳೀಯರು ಓಡಿ ಬಂದಿದ್ದು, ಕೂಡಲೇ ಶಂಕರ್ ನನ್ನು ಹಿಡಿದು ಥಳಿಸಿದ್ದಾರೆ. ಅಲ್ಲದೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಿ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.