ಕಣಿವೆ ರಾಜ್ಯದಲ್ಲಿ ಮತ್ತೆ ಇಬ್ಬರು ಉಗ್ರರ ಹುಟ್ಟಡಗಿಸಿದ ಭಾರತೀಯ ಸೇನೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆಯಲು ಯತ್ನಿಸಿದ್ದು, ಉಗ್ರರನ್ನು ಭಾರತೀಯ ಸೇನೆ ಸಮರ್ಥವಾಗಿ ಹಿಮ್ಮಟ್ಟಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆಯಲು ಯತ್ನಿಸಿದ್ದು, ಉಗ್ರರನ್ನು ಭಾರತೀಯ ಸೇನೆ ಸಮರ್ಥವಾಗಿ ಹಿಮ್ಮಟ್ಟಿಸಿದೆ.
ಶೋಪಿಯಾನ್ ನಲ್ಲಿ ಭಾರತೀಯ ಗಡಿ ದಾಟಿ ಒಳ ನುಸುಳಿದ್ದ ನಾಲ್ಕು ಮಂದಿ ಉಗ್ರರ ಮೇಲೆ ಸೇನೆ ಮುಗಿಬಿದ್ದಿದ್ದು, ಈ ಪೈಕಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಮತ್ತಿಬ್ಬರು ಉಗ್ರರು ಸೇನಾ ದಾಳಿಗೆ ಹೆದರಿ ಪರಾರಿಯಾಗಿದ್ದಾರೆ. 
ಶೋಪಿಯಾನ್ ನ ಖುಡ್ ಪೋರ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳ ಗುಂಡಿಗೆ ಸಿಕ್ಕಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಅಂತೆಯೇ ಮತ್ತಿಬ್ಬರು ಉಗ್ರರು ಪರಾರಿಯಾಗಿದ್ದು, ಅವರಿಗಾಗೆ ಸೇನೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com