ಅಯೋಧ್ಯೆಯ ಸರಯೂ ನದಿ ತೀರದಲ್ಲಿ ರಾಮನ ಪ್ರತಿಮೆ ನಿರ್ಮಿಸುವುದನ್ನು ಸ್ವಾಗತಿಸಿರುವ ಆಜಂ ಖಾನ್, ಇತ್ತೀಚೆಗಷ್ಟೇ ಉದ್ಘಾಟನೆಯಾದ 182 ಮೀಟರ್ ಇರುವ ಸರ್ದಾರ್ ಪಟೇಲ್ ಅವರ ಏಕತೆಯ ವಿಗ್ರಹಕ್ಕಿಂತಲೂ ರಾಮನ ವಿಗ್ರಹ ಎತ್ತರವಿರಬೇಕು ಎಂದು ಹೇಳಿದ್ದಾರೆ. ರಾಮನ ಪ್ರತಿಮೆಯನ್ನು ನಿರ್ಮಿಸುವುದಕ್ಕೆ ಯಾರೂ ವಿರೋಧಿಸುವುದಿಲ್ಲ, ಸರ್ದಾರ್ ಪಟೇಲ್ ಅವರ ಪ್ರತಿಮೆಗಿಂತಲೂ ರಾಮನ ಪ್ರತಿಮೆಯೇ ದೊಡ್ದದಾಗಿರಲಿ ಎಂದು ಆಜಂ ಖಾನ್ ಹೇಳಿದ್ದಾರೆ.