ಈ ಬಾರಿ ಸಾರ್ವಜನಿಕ ಹಿತಾಸಕ್ತಿಯನ್ನು ವ್ಯಾಖ್ಯಾನಿಸಿರುವ ಆರ್ ಬಿಐ, ಠೇವಣಿದಾರರು, ತೆರಿಗೆದಾರರನ್ನು ರಕ್ಷಿಸುವುದೇ ಸಾರ್ವಜನಿಕ ಹಿತಾಸಕ್ತಿ ಎಂದು ಹೇಳಿದೆ. ಆರ್ ಬಿಐ ನ ಉಪ ಗೌರ್ನರ್ ಎನ್ಎಸ್ ವಿಶ್ವನಾಥನ್ ಈ ಬಗ್ಗೆ ಮಾತನಾಡಿದ್ದು, ಸಾಲ ವಾಪಸ್ ಪಡೆಯುವುದಕ್ಕೆ ಬ್ಯಾಂಕ್ ಗಳು ಮುಂದಾಗಿವೆ ಎಂದರೆ ಅದು ಬ್ಯಾಂಕ್ ಗಳು ಠೇವಣಿದಾರರು ಹಾಗೂ ತೆರಿಗೆದಾರರ ಹಣ ವಾಪಸ್ ಪಡೆಯುವುದಕ್ಕೆ ಯತ್ನಿಸುತ್ತಿದೆ ಎಂಬುದು ಅದಕ್ಕೆ ಅರ್ಥ. ಹಾಗೆಂದ ಮಾತ್ರಕ್ಕೆ ಅದನ್ನು ನಿರ್ದಯ ಕೇಂದ್ರೀಯ ಬ್ಯಾಂಕ್-ನಿಸ್ಸಹಾಯಕ ಸಾಲಗಾರ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.