ಎಕ್ಸಿಟ್ ಪರೀಕ್ಷೆ: 'ಗೇಟ್' ತೆರೆದರೆ ಮಾತ್ರ ಕೈ ಸೇರಲಿದೆ ಇಂಜಿನಿಯರಿಂಗ್ ಪದವಿ!

ಪ್ರತಿ ವರ್ಷವೂ 3,00 ಇಂಜಿನಿಯರಿಂಗ್ ಕಾಲೇಜುಗಳಿಂದ ಹೊರಬರುವ ಇಂಜಿನಿಯರ್ ಗಳ ಸಂಖ್ಯೆ 7 ಲಕ್ಷ ತಲುಪಿದ್ದು, ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗ ಸಿಗುವುದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
'ಗೇಟ್' ತೆರೆದರೆ ಮಾತ್ರ ಕೈ ಸೇರಲಿದೆ ಇಂಜಿನಿಯರಿಂಗ್ ಪದವಿ
'ಗೇಟ್' ತೆರೆದರೆ ಮಾತ್ರ ಕೈ ಸೇರಲಿದೆ ಇಂಜಿನಿಯರಿಂಗ್ ಪದವಿ
Updated on
ಬೆಂಗಳೂರು: ಪ್ರತಿ ವರ್ಷವೂ 3,00 ಇಂಜಿನಿಯರಿಂಗ್ ಕಾಲೇಜುಗಳಿಂದ ಹೊರಬರುವ ಇಂಜಿನಿಯರ್ ಗಳ ಸಂಖ್ಯೆ 7 ಲಕ್ಷ ತಲುಪಿದ್ದು, ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗ ಸಿಗುವುದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಈ ಬೆಳವಣಿಗೆಯನ್ನು ಗಮನಿಸಿರುವ ತಾಂತ್ರಿಕ ವಿದ್ಯಾಭ್ಯಾಸಕ್ಕಾಗಿ ಇರುವ ಅಖಿಲ ಭಾರತೀಯ ಪರಿಷತ್ (ಎಐಸಿಟಿಇ) ಗೇಟ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡವರಿಗೆ ಮಾತ್ರವೇ ಇಂಜಿನಿಯರಿಂಗ್ ಪದವಿ ನೀಡುವುದಕ್ಕೆ ನಿರ್ಧರಿಸಿದೆ. 
2019-2020 ರಿಂದ ತಾಂತ್ರಿಕ ಕೋರ್ಸ್ ಗಳನ್ನು ಓದುವ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯವಾಗಲಿದ್ದು, ಗ್ರಾಜ್ಯೂಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (ಗೇಟ್) ಪರೀಕ್ಷೆಯನ್ನು ತೇರ್ಗಡೆಗೊಳಿಸಿದವರಿಗಷ್ಟೇ ಇನ್ನು ಮುಂದಿನ ದಿನಗಳಲ್ಲಿ ಇಂಜಿನಿಯರಿಂಗ್ ಪದವಿ ಕೈಗೆ ಸೇರಲಿದೆ. ಗೇಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗದವರು ಮತ್ತೊಮ್ಮೆ ಗೇಟ್ ಪರೀಕ್ಷೆ ಬರೆಯಬೇಕಾಗುತ್ತದೆ. 
ಎಐಟಿಇ ಸಭೆಯಲ್ಲಿ ಈ ನಿರ್ಣಯಕ್ಕೆ ಬರಲಾಗಿದ್ದು, ಒಮ್ಮತ ಮೂಡಿದ ಬಳಿಕ ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗುತ್ತದೆ. ಎಐಸಿಟಿಇ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕೆಲವರು ಈ ನಿರ್ಧಾರವನ್ನು ಸ್ವಾಗತಿಸಿದ್ದರೆ, ಇನ್ನೂ ಕೆಲವರು ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ. ಆದರೆ ವಿದ್ಯಾರ್ಥಿಗಳು ಮಾತ್ರ ಈ ನಿರ್ಣಯವನ್ನು ವಿರೋಧಿಸುತ್ತಿದ್ದಾರೆ.
ಪದವಿಯ ಅಂತಿಮ ವರ್ಷದಲ್ಲಿ ಉದ್ಯೋಗಕ್ಕೆ ಆಯ್ಕೆಯಾದವರು, ಒಂದು ವೇಳೆ ಗೇಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗದೇ ಇದ್ದರೆ ಪರಿಸ್ಥಿತಿ ಏನು ಎಂದು ಕಾಲೇಜಿನ ಪ್ರಾಂಶುಪಾಲರು ಎಐಟಿಇ ನಿರ್ಣಯವನ್ನು ಪ್ರಶ್ನಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com