ವಸುಂಧರಾ ರಾಜೆ ಹಾಲಿ ಶಾಸಕರಿಗೆ ಟಿಕೆಟ್ ನೀಡಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರೆ, ಅಮಿತ್ ಶಾ ಕಾರ್ಯಕರ್ತರ ಪ್ರತಿಕ್ರಿಯೆಗೆ ಅನುಗುಣವಾಗಿ ಕೇಂದ್ರ ನಾಯಕರ ಒಮ್ಮತದದೊಂದಿಗೆ ಅಭ್ಯರ್ಥಿಗಳ ಪಟ್ಟಿ ತಯಾರಾಗಬೇಕೆನ್ನುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಹಾಲಿ ಶಾಸಕರು ಬಂಡಾಯ ಏಳುವ ಸಾಧ್ಯತೆ ಇದೆ ಎಂದು ವಸುಂಧರಾ ರಾಜೆ ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಹಾಗೂ ವಸುಂಧರಾ ರಾಜೆ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು ಚುನಾವಣೆ ಸಂದರ್ಭದಲ್ಲಿ ಈ ಭಿನ್ನಾಭಿಪ್ರಾಯ ಪಕ್ಷದ ಗೆಲುವಿಗೆ ಮುಳುವಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.