ಬಿಜೆಪಿ ಮುಸ್ಲಿಂ ಮುಕ್ತ ಭಾರತ ಮಾಡಲು ಹೊರಟಿದೆ: ಅಸಾದುದ್ದೀನ್ ಓವೈಸಿ

ಬಿಜೆಪಿ ಮುಸ್ಲಿಂ ಮುಕ್ತ ಭಾರತ ಮಾಡಲು ಹೊರಟಿದೆ ಎಂದು ಸಂಸದ ಅಸಾದುದ್ದೀನ್ ಓವೈಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...
ಅಸಾಸುದ್ದೀನ್ ಓವೈಸಿ
ಅಸಾಸುದ್ದೀನ್ ಓವೈಸಿ
ಹೈದರಾಬಾದ್: ಬಿಜೆಪಿ ಮುಸ್ಲಿಂ ಮುಕ್ತ ಭಾರತ ಮಾಡಲು ಹೊರಟಿದೆ ಎಂದು ಸಂಸದ ಅಸಾದುದ್ದೀನ್ ಓವೈಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ತೆಲಂಗಾಣ ವಿಧಾನಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಓವೈಸಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತದಲ್ಲಿ ಅಲ್ಪಸಂಖ್ಯಾತ ಸಮುದಾಯದವರನ್ನು ಬೆದರಿಸುವ ಪ್ರಯತ್ನ ನಡೆಸುತ್ತಿದ್ದು ಬಿಜೆಪಿ ಮುಸ್ಲಿಂ ಮುಕ್ತ ಭಾರತ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ. 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇತ್ತೀಚೆಗೆ ತೆಲಂಗಾಣಕ್ಕೆ ಭೇಟಿ ನೀಡಿದ್ದಾಗ ಮಜ್ಲಿಸ್ ಮುಕ್ತ ಹೈದರಾಬಾದ್ ಮಾಡುತ್ತೇನೆ ಎಂದಿದ್ದರು. ಅಮಿತ್ ಶಾ ಜೀ... ನೀವು ಮಜ್ಲಿಸ್ ಮುಕ್ತ ಮಾಡುವ ಧ್ಯೇಯ ಹೊಂದಿಲ್ಲ. ಬದಲಿಗೆ ಮುಸ್ಲಿಂ ಮುಕ್ತ ಭಾರತ ಮಾಡುವ ಧ್ಯೇಯ ಹೊಂದಿದ್ದೀರಾ ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com