ರಾಂಚಿ: ಬಯಲಿನಲ್ಲಿ ಶೌಚ ಮಾಡಿದ್ದಕ್ಕೆ ವ್ಯಕ್ತಿಯನ್ನು ಕೊಂದ ಕಿರಾತಕರು!

ಬಯಲಿನಲ್ಲಿ ಮಲವಿಸರ್ಜನೆ ಮಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಉಸಿರುಗಟ್ಟಿಸಿ ಕೊಂಡದಿರುವ ಆಘಾತಕಾರಿ ಘಟನೆ ರಾಂಚಿಯ ಸುಕ್ರಾ ಬಜಾರ್ ನ ಪಲಮು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ರಾಂಚಿ: ಬಯಲಿನಲ್ಲಿ ಮಲವಿಸರ್ಜನೆ ಮಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಉಸಿರುಗಟ್ಟಿಸಿ ಕೊಂಡದಿರುವ ಆಘಾತಕಾರಿ ಘಟನೆ ರಾಂಚಿಯ ಸುಕ್ರಾ ಬಜಾರ್ ನ ಪಲಮು ಜಿಲ್ಲೆಯಲ್ಲಿ ನಡೆದಿದೆ.
ತಮ್ಮ ಜಮೀನಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬ ಮಲ ವಿಸರ್ಜನೆ ಮಾಡಿದ್ದನ್ನು ನೋಡಿದ ಆರೋಪಿಗಳು ಆತನನ್ನು ಕೊಲೆ ಮಾಡಿದ್ದಾರೆ ಎಂದು ತನಿಖೆ ನಡೆಸಿರುವ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ,
ಇದೇ ವಿಷಯವಾಗಿ ಈ ಹಿಂದೆಯೂ ಜಗಳ ನಡೆದಿತ್ತು ಎನ್ನಲಾಗಿದೆ. ಇಬ್ಬರು ಕುಟುಂಬಗಳು ಸಂಬಂಧಿಕರಾಗಿದ್ದು, ಜಮೀನು ವಿವಾದ ಸಂಬಂಧ ಮನಸ್ತಾಪ ಮೂಡಿತ್ತು. ಗುರುವಾರ ಮೃತ ವ್ಯಕ್ತಿ ಆರೋಪಿಗಳ ಜಮೀನಲ್ಲಿ ಶೌಚ ಮಾಡುತ್ತಿದ್ದನ್ನು ಕಂಡು ಆತನನ್ನು ಕೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಮಹೇಂದ್ರ ಮತ್ತು ಚೋಟುಕುಮಾರ್ ಎಂಬ ಇಬ್ಬರನ್ನು ಬಂಧಿಸಲಾಗಿದ್ದು, ಪ್ರಕರಣದ ಮತ್ತೊಬ್ಬ ಮಹಿಳಾ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ವ್ಯಕ್ತಿಯ ಪುತ್ರನ ಆಧಾರದ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಇಬ್ಬರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com