ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರತಿ ವರ್ಷ 1 ಲಕ್ಷ ಹಸುಗಳನ್ನು ಉಚಿತವಾಗಿ ನೀಡುವ ಭರವಸೆ ನೀಡುತ್ತಿದೆ.
ಗ್ರಾಮಗಳಲ್ಲಿ ಹಬ್ಬದ ಸಂದರ್ಭಗಳಲ್ಲಿ ಹಾಗೂ ಇತರೆ ವಿಶೇಷ ಸಂದರ್ಭಗಳಲ್ಲಿ ಜನತೆಗೆ ಉಚಿವಾಗಿ ಹಸುಗಳನ್ನು ನೀಡುವ ಪ್ರಸ್ತಾಪ ಇದೆ ಎಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎನ್ ವಿಎಸ್ ಎಸ್ ಪ್ರಭಾಕರ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಕೃಷಿಯಲ್ಲಿ ಮತ್ತು ಬಡವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಸುಗಳ ಪಾತ್ರ ಬಹಳ ಮುಖ್ಯ ಎಂದ ಪ್ರಭಾಕರ್ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 'ಮಿನಿ-ಇಂಡಿಯಾ ಭಾಷಾ ಕಲ್ಯಾಣ ಮಂಡಳಿ' ಸ್ಥಾಪಿಸುವ ಪ್ರಸ್ತಾಪವೂ ಪ್ರಣಾಳಿಯಲ್ಲಿದೆ ಎಂದರು.
ತೆಲಂಗಾಣದಲ್ಲಿ ಬಿಜೆಪಿ ಪ್ರಣಾಳಿಕೆ ಮುಂದಿನ ವಾರ ಅಧಿಕೃತವಾಗಿ ಬಿಡುಗಡೆಯಾಗುವ ಸಾಧ್ಯತೆ ಇದೆ.