ಮತಕ್ಕಾಗಿ ಭಕ್ಷಕರು ಗೋವುಗಳ ಆರಾಧಕರಂತೆ ನಟಿಸುತ್ತಿದ್ದಾರೆ: ಬಿಜೆಪಿ ಶಾಸಕ

ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತಕ್ಕಾಗಿ ಭಕ್ಷಕರು ಗೋವುಗಳ ಆರಾಧಕರಂತೆ ನಟಿಸುತ್ತಿದ್ದಾರೆಂದು ಮಧ್ಯಪ್ರದೇಶ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ಅವರು ಭಾನುವಾರ ಹೇಳಿದ್ದಾರೆ...
ಮಧ್ಯಪ್ರದೇಶ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ
ಮಧ್ಯಪ್ರದೇಶ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ
ಭೋಪಾಲ್: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತಕ್ಕಾಗಿ ಭಕ್ಷಕರು ಗೋವುಗಳ ಆರಾಧಕರಂತೆ ನಟಿಸುತ್ತಿದ್ದಾರೆಂದು ಮಧ್ಯಪ್ರದೇಶ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ಅವರು ಭಾನುವಾರ ಹೇಳಿದ್ದಾರೆ. 
ಮಧ್ಯಪ್ರದೇಶ ವಿಧಾನಸಬಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ರಾಮ್ ವನ್ ಗಮನ್ ಮಾರ್ಗ ಪ್ರವಾಸವನ್ನು ಆರಂಭಿಸುವುದಾಗಿ, ಗೋವುಗಳ ರಕ್ಷೆ ಮಾಡುವುದಾಗಿ, ಗೋಶಾಲೆಗಳಲ್ಲಿ ಗೋಮೂತ್ರ ಹಾಗೂ ಹಸುವಿನ ಬೆರಣಿಯನ್ನು ಮಾರಾಟ ಮಾಡುವುದಾಗಿ ತಿಳಿಸಿದೆ. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಮೇಶ್ವರ್ ಶರ್ಮಾ ಅವರು, ಕೇರಳದಲ್ಲಿ ತನ್ನ ಪಕ್ಷದ ಕಾರ್ಯಕರ್ತರು ಕೋವುಗಳನ್ನು ಹತ್ಯೆ ಮಾಡಿದ್ದರು. ಇದೀಗ ಅದೇ ಪಕ್ಷದ ಭಕ್ಷಕರು ಗೋವುಗಳ ಅರಾಧನೆ ಮಾಡುವುದಾಗಿ ಹೇಳುತ್ತಿದ್ದಾರೆ. ಕೇವಲ ಮತಕ್ಕಾಗಿ ಭಕ್ಷಕರು ಗೋವುಗಳನ್ನು ರಕ್ಷಣೆ ಮಾಡುವುದಾಗಿ ನಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com