'ಅದ್ಭುತ! ಒಬ್ಬ ಕ್ಯಾಬಿನೆಟ್ ಸಚಿವರೊಬ್ಬರು ಇನ್ನೂ ಓಡುತ್ತಲೇ ಇದ್ದಾರೆ… ಸಚಿವರೊಬ್ಬರು ತಲೆ ಮರೆಸಿಕೊಳ್ಳುತ್ತಾರೆ ಮತ್ತು ಅವರು ಎಲ್ಲಿದ್ದಾರೆ ಎಂಬುದು ಯಾರೊಬ್ಬರಿಗೂ ತಿಳಿದಿಲ್ಲ. ಇದು ಹೇಗೆ ಸಾಧ್ಯ? ಸಚಿವರೊಬ್ಬರನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ ಎಂಬುದರ ಗಂಭೀರತೆ ಎಂಥದ್ದು ಎಂದು ನಿಮಗೆ ಗೊತ್ತಿದೆ. ಇದು ಅತಿಯಾಯಿತು, ಎಂದು ನ್ಯಾಯಮೂರ್ತಿ ಮದನ್ ಬಿ.ಲೋಕುರ್ ಅವರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.