ದೇಶದಲ್ಲಿ ಸಮುದ್ರ ಮಾರ್ಗದಲ್ಲಿ ಸಾರಿಗೆ ಸಾಮಾನ್ಯ. ಆದರೆ ಇದೀಗ ಒಳನಾಡಿನ ಜಲ ಮಾರ್ಗಗಳ ಸದ್ಬಳಕೆಗೆ ಕೇಂದ್ರ ಸರ್ಕಾರ ಕ್ರಾಂತಿಕಾರಕ ಯೋಜನೆ ರೂಪಿಸಿದ್ದು, ಅದರ ಭಾಗವಾಗಿ ಪ್ರಧಾನಿ ಮೋದಿ ಹಾಗೂ ಬಂದರು ಸಚಿವ ನಿತಿನ್ ಗಡ್ಕರಿ ಅವರು ಇಂದು ಗಂಗಾ ನದಿಯ ಮೇಲೆ ನಿರ್ಮಾಣಗೊಂಡಿರುವ ಒಳನಾಡು ಬಂದರನ್ನು ಉದ್ಘಾಟಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.