ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶ: ಅಂತಿಮ ದರ್ಶನಕ್ಕೆ ಬೆಂಗಳೂರಿನತ್ತ ಪ್ರಧಾನಿ ಮೋದಿ

ಬಹು ಅಂಗಾಂಗ ವೈಫಲ್ಯದಿಂದಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದು, ಈ ಹಿನ್ನಲೆಯಲ್ಲಿ ಅಂತಿಮ ದರ್ಶನ ಪಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ: ಬಹು ಅಂಗಾಂಗ ವೈಫಲ್ಯದಿಂದಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದು, ಈ ಹಿನ್ನಲೆಯಲ್ಲಿ ಅಂತಿಮ ದರ್ಶನ ಪಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. 
ಇಂದು ಬೆಳಿಗ್ಗೆ 10.30ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದು, ಅಂತಿಮ ದರ್ಶನ ಪಡೆಯಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಆದರೆ, ಈ ಕುರಿತು ಪ್ರಧಾನಿಮಂತ್ರಿಗಳ ಕಾರ್ಯಾಲಯ ಅಧಿಕೃತ ಮಾಹಿತಿಗಳನ್ನು ಘೋಷಣೆ ಮಾಡಿಲ್ಲ.
ಅನಂತ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ 8 ರಿಂದಲೇ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಿದ್ದು, ಇದಕ್ಕಾಗಿ ಸಕಲ ಭದ್ರತಾ ಕ್ರಮಗಳನ್ನು ಕಾೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com