ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಗ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ, ರೈತರನ್ನು ನಿರ್ಲಕ್ಷ್ಯಿಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ.
ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ನೀತಿ ನಿಯಮಗಳನ್ನು ರೂಪಿಸಲು ವಿಫಲವಾಗಿದೆ, ಜೊತೆಗೆ ರಾಮ ದೇವಾಲಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ ಎಂದು ದೂರಿದ್ದಾರೆ.
ದೇಶದ ಜನತೆಯ ಗಮನವನ್ನು ಬೇರೆಡೆ ಹರಿಸುವಂತೆ ಮಾಡುತ್ತಿದ್ದಾರೆ. ಸಾಲಮನ್ನಾ ಮಾಡುವುದು ಸೇರಿದಂತೆ ಸರ್ಕಾರ ಯಾವುದೇ ಸೂಕ್ತ ಯೋಜನೆ ಜಾರಿಗೆ ತಂದಿಲ್ಲ ರೈತರ ಜ್ವಲಂತ ಸಮಸ್ಯೆಗಳನ್ನು ಚರ್ಚಿಸುತ್ತಿಲ್ಲ,ಅದರ ಬದಲು ಸದಾ ರಾಮ ಮಂದಿರದ ಬಗ್ಗೆಯೇ ಚಿಂತಿಸುತ್ತಿದೆ ಎಂದು ಆಪಾದಿಸಿದ್ದಾರೆ.