ಮದಲ-ಮಕರವಿಲಕ್ಕು ಪೂಜೆ ಶನಿವಾರದಿಂದ ಪ್ರಾರಂಭವಾಗಲಿದ್ದು, ವಯಸ್ಸಿನ ಮಿತಿ ಇಲ್ಲದೇ ಮಹಿಳೆಯರಿಗೆ ಪ್ರವೇಶ ನೀಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶಬರಿಮಲೆ ದೇವಾಲಯಕ್ಕೆ ನ.17 ರಂದು ಭೇಟಿ ನೀಡುವುದಾಗಿ ತೃಪ್ತಿ ದೇಸಾಯಿ ಹೇಳಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ತಮಗೆ ಬೆದರಿಕೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭದ್ರತೆ ನೀಡುವಂತೆ ಕೇರಳ ಸಿಎಂ ವಿಜಯ್ ಪಿಣರಾಯಿ ಅವರಿಗೆ ಇ-ಮೇಲ್ ಮೂಲಕ ಮನವಿ ಸಲ್ಲಿಸಿದ್ದಾರೆ.