ನ.17 ರಂದು ಶಬರಿಮಲೆಗೆ ತೆರಳಲಿರುವ ತೃಪ್ತಿ ದೇಸಾಯಿ

ಶನಿ ಶಿಂಗ್ಣಾಪುರ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ನ.17 ರಂದು ಶಬರಿಮಲೆಗೆ ಹೋಗುವುದಾಗಿ ಹೇಳಿದ್ದಾರೆ.
ನ.17 ರಂದು ಶಬರಿಮಲೆಗೆ ತೆರಳಲಿರುವ ತೃಪ್ತಿ ದೇಸಾಯಿ
ನ.17 ರಂದು ಶಬರಿಮಲೆಗೆ ತೆರಳಲಿರುವ ತೃಪ್ತಿ ದೇಸಾಯಿ
Updated on
ತಿರುವನಂತಪುರಂ: ಶನಿ ಶಿಂಗ್ಣಾಪುರ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ನ.17 ರಂದು ಶಬರಿಮಲೆಗೆ ಹೋಗುವುದಾಗಿ ಹೇಳಿದ್ದಾರೆ. 
ಮದಲ-ಮಕರವಿಲಕ್ಕು ಪೂಜೆ ಶನಿವಾರದಿಂದ ಪ್ರಾರಂಭವಾಗಲಿದ್ದು, ವಯಸ್ಸಿನ ಮಿತಿ ಇಲ್ಲದೇ ಮಹಿಳೆಯರಿಗೆ ಪ್ರವೇಶ ನೀಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶಬರಿಮಲೆ ದೇವಾಲಯಕ್ಕೆ ನ.17 ರಂದು ಭೇಟಿ ನೀಡುವುದಾಗಿ ತೃಪ್ತಿ ದೇಸಾಯಿ ಹೇಳಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ತಮಗೆ ಬೆದರಿಕೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭದ್ರತೆ ನೀಡುವಂತೆ ಕೇರಳ ಸಿಎಂ ವಿಜಯ್ ಪಿಣರಾಯಿ ಅವರಿಗೆ ಇ-ಮೇಲ್ ಮೂಲಕ ಮನವಿ ಸಲ್ಲಿಸಿದ್ದಾರೆ. 
ಶಬರಿಮಲೆ ದೇವಾಲಯ ದರ್ಶನ ಮಾಡದೇ ಮಹಾರಾಷ್ಟ್ರಕ್ಕೆ ವಾಪಸ್ ಬರುವುದಿಲ್ಲ ಎಂದು ತೃಪ್ತಿ ದೇಸಾಯಿ ಹೇಳಿದ್ದು ಸರ್ಕಾರ ನಮಗೆ ಭದ್ರತೆ ನೀಡಲಿದೆ ಎಂಬ ಭರವಸೆಯಲ್ಲಿರುವುದಾಗಿ ಇ-ಮೇಲ್ ನಲ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com