ನೆಹರು ಜನ್ಮದಿನದಂದು ದೆಹಲಿಯಲ್ಲಿ ಆಯೋಜಿಸಿದ್ದ ತಮ್ಮ 'ನೆಹರೂ, ದಿ ಇನ್ವೆಂಷನ್ ಆಫ್ ಇಂಡಿಯಾ' ಪುಸ್ತಕ ಮರುಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ತರೂರ್, 'ಯಾವುದೇ ಭಾರತೀಯನೂ ಸಹ ಅತ್ಯುನ್ನತ ಮಟ್ಟಕ್ಕೆ ಏರಲು ಅವಕಾಶ ಇರುವ ಮಟ್ಟಿಗಿನ ಸಂಸ್ಥೆಗಳನ್ನು ಹಾಗೂ ವ್ಯವಸ್ಥೆಗಳನ್ನು ಚಾಚಾ ಜವಹರ್ ಲಾಲ್ ನೆಹರೂ ತಂದ ಕಾರಣ ಇಂದು ಚಾಯ್ವಾಲಾರಂಥವರು ಪ್ರಧಾನ ಮಂತ್ರಿಯಾಗಿದ್ದಾರೆ ಎಂದು ಹೇಳಿದ್ದಾರೆ.