ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿ, ದೇಶದ ಮೊದಲು ಹಾಗೂ ಸುದೀರ್ಘವಾಗಿ ಆಡಳಿತ ನಡೆಸಿದ್ದ ಪ್ರಧಾನಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರು, ನೆಹರು ಅವರು ತಮ್ಮ ಜೀವನವನ್ನು ದೇಶಕ್ಕಾಗಿ ಮುಡಿಪಾಗಿಟ್ಟಿದ್ದರು. ಬಲವಾದ ಪ್ರಜಾಪ್ರಭುತ್ವಕ್ಕೆ ನೆಹರು ಅವರು ಅಡಿಪಾಯ ಹಾಕಿದ್ದರು. ಇದೀಗ ಅದನ್ನೇ ನಾವು ಆಧುನಿಕ ಪ್ರಜಾಪ್ರಭುತ್ವದ ಆಕಾರವನ್ನು ನೀಡಿದ್ದೇವೆ. ಇಂದು ಧೀಮಂತ ನಾಯಕನಿಗೆ ಗೌರವ ಸಲ್ಲಿಸುವ ದಿನ, ನೆಹರು ಅವರನ್ನು ಸ್ಮರಿಸುವ ದಿನ ಎಂದು ಹೇಳಿದೆ.