ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು!

ಹಿಂದುತ್ವ ರಾಯಭಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ವೀರ್‌ ಸಾವರ್ಕರ್‌ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ...
ವೀರ್ ಸಾವರ್ಕರ್
ವೀರ್ ಸಾವರ್ಕರ್
Updated on
ಮುಂಬಯಿ: ಹಿಂದುತ್ವ ರಾಯಭಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ವೀರ್‌ ಸಾವರ್ಕರ್‌ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ದ ದೂರುದಾಖಲಿಸಲಾಗಿದೆ. 
ವೀರ ಸಾವರ್ಕರ್‌ ಅವರ ಮರಿ-ಸೋದರ ಸಂಧಿ ರಂಜೀತ್‌ ಸಾವರ್ಕರ್‌ ಅವರು ಮುಂಬಯಿ ಶಿವಾಜಿ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ  ರಾಹುಲ್ ವಿರುದ್ದ ದೂರು ದಾಖಲಿಸಿದ್ದಾರೆ. 
ಸ್ವಾತಂತ್ರ್ಯ ಹೋರಾಟಗಾರನಾಗಿ ಜೈಲು ಸೇರಿದ್ದ ವೀರ್‌ ಸಾವರ್ಕರ್‌ ಅವರು ಬ್ರಿಟಿಷರ ಬಳಿ ತನ್ನನ್ನು   ಜೈಲಿನಿಂದ ಬಿಡುಗಡೆ ಮಾಡುವಂತೆ ಅಂಗಲಾಚಿದ್ದರು ಮತ್ತು ತನ್ನ ಕೃತ್ಯಗಳಿಗಾಗಿ ಕ್ಷಮೆಯಾಚಿಸಿದ್ದರು ಎಂದು ರಾಹುಲ್‌ ಗಾಂಧಿ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿದ್ದರು. 
"ಸಾವರ್ಕರ್‌ ಅವರನ್ನು ಅವಮಾನಿಸುವ ಹೇಳಿಕೆ ನೀಡಿರುವ ಕಾರಣಕ್ಕೆ ನಾನು ರಾಹುಲ್‌ ಗಾಂಧಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ' ಎಂದು ರಂಜೀತ್‌ ಸಾವರ್ಕರ್‌ ಸುದ್ದಿಗಾರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com