ಇನ್ನು, ತಮಿಳುನಾಡು ವಿಪತ್ತು ನಿರ್ವಹಣಾ ಮಂಡಳಿಯ ಕಾರ್ಯವನ್ನು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಶ್ಲಾಘಿಸಿದ್ದಾರೆ. ಸೈಕ್ಲೋನ್ ಗಜ ರಾಜ್ಯಕ್ಕೆ ಪ್ರವೇಶ ಮಾಡುವ ಮುನ್ನವೇ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಿದ್ದಕ್ಕೆ ಶ್ಲಾಘನೆ ಮಾಡಿದ್ದಾರೆ. ಅಲ್ಲದೆ, ಚಂಡಮಾರುತದಿಂದ ತೊಂದರೆಗೊಳಗಾಗಿರುವ ಜನತೆಗೆ ನೆರವಾಗಲು ತನ್ನ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.