ಛತ್ತೀಸ್ ಗಢದ ಎರಡನೇ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ ಪ್ರಧಾನಿ ಶುಕ್ರವಾರ ನಡೆದ ಸಮಾವೇಶವೊಂದರಲ್ಲಿ "ನಾನು ಈ ಮೂಲಕ ಕೈ ನಾಯಕರಿಗೆ ಸವಾಲೆಸೆಯುತ್ತೇನೆ, ಗಾಂಧಿ ಕುಟುಂಬದ ಹೊರಗಿನ ಕೆಲ ಒಳ್ಳೆಯ ನಾಯಕರನ್ನು ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿ ಕನಿಷ್ಟ ಐದು ವರ್ಷಗಳ ಕಾಲ ನೇಮಕ ಮಾಡಿ ತೋರಿಸಿರಿ.ಹಾಗೆ ಮಾಡಿದರೆ ನಾನು ನೆಹರೂ ನಿಜವಾಗಿಯೂ ಇಲ್ಲಿ ಒಳ್ಳೆಯ ಪ್ರಜಾಪ್ರಭುತ್ವ ವ್ಯವಸ್ಥೆ ರಚಿಸಿದ್ದರೆಂದು ನಂಬುತ್ತೇನೆ" ಎಂದರು.