ಮಂಜು ವರ್ಮಾ ಅವರನ್ನು ಒಂದು ತಿಂಗಳಿಂದ ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂಬುದನ್ನು ಕೇಳಿ ನಮಗೆ ಶಾಕ್ ಆಗಿದೆ. ಪ್ರಮುಖ ವ್ಯಕ್ತಿಯೊಬ್ಬರನ್ನು ಪತ್ತೆ ಹಚ್ಚಲು ಏಕೆ ಸಾಧ್ಯವಾಗುತ್ತಿಲ್ಲ ಎಂಬುದರ ಬಗ್ಗೆ ಪೊಲೀಸ್ ಇಲಾಖೆ ನ್ಯಾಯಾಲಯದ ಮುಂದೆ ಬಂದು ಸ್ಪಷ್ಟೀಕರಣ ನೀಡಬೇಕು. ಮುಂದಿನ ವಿಚಾರಣೆಗೆ ಪೊಲೀಸ್ ಮಹಾ ನಿರ್ದೇಶಕರು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ತಾಕೀತು ಮಾಡಿದ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ನ.27ಕ್ಕೆ ಮುಂದೂಡಿದೆ.