ಸಂಸತ್ತಿನಲ್ಲಿ ಮುಂಬರುವ ಚಳಿಗಾಲ ಅಧಿವೇಶನದ ವೇಳೆ ಪಕ್ಷ ಈ ವಿಚಾರವನ್ನು ಪ್ರಸ್ತಾಪ ಮಾಡಲಿದೆ. ಗೋವಾ ಸರ್ಕಾರ ಅಸ್ತವ್ಯವಸ್ತಗೊಂಡಿರುವ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೋಗೂ ಗೋವಾ ರಾಜ್ಯಪಾಲರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ವಿಶೇಷ ಅಧಿವೇಶನ ಕರೆದು ಆಡಳಿತಾರೂಢ ಪಕ್ಷ ಬಹುಮತ ಸಾಬೀತುಪಡಿಸುವಂತೆ ಸೂಚಿಸುವಂತೆ ರಾಜ್ಯಪಾಲರ ಬಳಿಯೂ ಮನವಿ ಮಾಡಿಕೊಂಡಿದ್ದೇವೆಂದು ತಿಳಿಸಿದ್ದಾರೆ.