ಈಗಾಗಲೇ ಮನೋಹರ್ ಪರಿಕ್ಕರ್ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಸುದಿನ್ ಧಾವಳೀಕರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಗೋಮಾಂತಕ್ ಪಕ್ಷ ಒತ್ತಾಯಿಸಿದೆ. ಮುಖ್ಯಮಂತ್ರಿಗಳ ಹುದ್ದೆ ಪಕ್ಷಕ್ಕೆ ಸಿಗದೇ ಇದ್ದರೆ ಲೋಕಸಭಾ ಚುನಾವಣೆ, ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಜೊತೆ ಸ್ಪರ್ಧಿಸದೇ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಗೋಮಾಂತಕ್ ಪಕ್ಷ ಎಚ್ಚರಿಕೆ ನೀಡಿದೆ.