ಹಿಂದೂ ಐಕ್ಯವೇದಿಯ ರಾಜ್ಯಾಧ್ಯಕ್ಷರಾದ ಕೆಪಿ ಶಶಿಕಲಾ ಅವರನ್ನು ಬಂಧಿಸಿರುವ ಕೇರಳ ಪೊಲೀಸರ ನಡೆಯನ್ನು ಖಂಡಿಸಿ ಶಬರಿಮಲೆ ಕ್ರಿಯಾ ಸಮಿತಿ ಇಂದು ಕೇರಳದಾದ್ಯಂತ ಬಂದ್ ಗೆ ಕರೆ ನೀಡಿದ್ದು, ಬೆಳಗ್ಗೆ 6 ಗಂಟೆಯಿಂದ ಸಂಜೆ 6ಗಂಟೆಯವರೆಗೂ ತಮ್ಮ ಪ್ರತಿಭಟನೆಗೆ ಬೆಂಬಲ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಬಂದ್ ಹಿನ್ನೆಲೆಯಲ್ಲಿ ಕೇರಳದಲ್ಲಿ ಬಸ್ ಸಂಚಾರ ಸಂಪೂರ್ಣ ಮೊಟಕುಗೊಂಡಿದ್ದು, ಕೆ ಎಸ್ ಆರ್ ಟಿ ಸಿ ಸೇರಿದಂತೆ ಯಾವುದೇ ಬಸ್ಸುಗಳು ರಸ್ತೆಗಿಳಿದಿಲ್ಲ.