ಪತ್ರಕರ್ತ ಸಂತೋಷ್ ತಮ್ಮಯ್ಯಗೆ ಜೀವ ಬೆದರಿಕೆ!

ಟಿಪ್ಪು ಜಯಂತಿ ವಿರೋಧಿಸುವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಲಾಗಿದೆ.
ಸಂತೋಷ್ ತಮ್ಮಯ್ಯ
ಸಂತೋಷ್ ತಮ್ಮಯ್ಯ
Updated on
ಬೆಂಗಳೂರು: ಟಿಪ್ಪು ಜಯಂತಿ ವಿರೋಧಿಸುವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಲಾಗಿದೆ. 
ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಿಸುವುದನ್ನು ಖಂಡಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಂತೋಷ್ ತಮ್ಮಯ್ಯ, ಟಿಪ್ಪು ಮತಾಂಧತೆಗೆ ಕಾರಣವಾಗಿದ್ದ ಮನಸ್ಥಿತಿಯನ್ನು ವಿಮರ್ಶಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಧರ್ಮ ನಿಂದನೆ ಪ್ರಕರಣ ದಾಖಲಾಗಿತ್ತು. ಸಂತೋಷ್ ತಮ್ಮಯ್ಯ ಅವರನ್ನು ಇದೇ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಿ ಜಾಮೀನು ನೀಡಿ ಬಿಡುಗಡೆ ಮಾಡಲಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯೂ ಆಗಿತ್ತು. ಸಂತೋಷ್ ತಮ್ಮಯ್ಯ ಟಿಪ್ಪು ವಿರುದ್ಧ ಮಾತನಾಡಿದ್ದಕ್ಕೆ ಫೇಸ್ ಬುಕ್ ನಲ್ಲಿ ಜೀವ ಬೆದರಿಕೆ ಹಾಕಲಾಗಿದೆ. 
ಪೋಸ್ಟ್ ಒಂದಕ್ಕೆ ಕಾಮೆಂಟಿಸಿರುವ ಸಂಘಗಳ ಸಂಹಾರ ಎಂಬ ಖಾತೆಯ ಪ್ರೊಫೈಲ್ ಸಂತೋಷ್ ತಮ್ಮಯ್ಯ ವಿರುದ್ಧ ಅವಹೇಳನಕಾರಿ ಶಬ್ದಗಳಲ್ಲಿ ನಿಂದಿಸಿದ್ದು, "ಸಂತೋಷ್ ನ್ನು ಒಂದು ತಿಂಗಳ ಒಳಗೆ ನಾವು ತೆಗೀತೀವಿ ನಿಮ್ಮ ಕೈಯಲ್ಲಿ ಏನು ಕಿಸಿಯೋಕೆ ಆಗುತ್ತೋ ಕಿಸಿಯಿರಿ ಎಂದು ಬರೆಯಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com