ಸ್ಫೋಟ ಕೃತ್ಯದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಅಮರಿಂದರ್ ಸಿಂಗ್ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸುಳಿವು ಲಭಿಸಿದ್ದು, ಇಬ್ಬರು ವ್ಯಕ್ತಿಗಳು ಪಿಸ್ತೂಲ್ ಹಿಡಿದ ನಿರಾನ್ಕಾರಿ ಭವನದ ಬಳಿ ನುಗ್ಗುತ್ತಿರುವುದು, ಗ್ರೆನೇಡ್ ನ್ನು ಪ್ರಾರ್ಥನಾ ಸಭೆಯನ್ನು ಗುರಿಯಾಗಿರಿಸಿಕೊಂಡು ಎಸೆದು ಪರಾರಿಯಾಗಿರುವುದು ತನಿಖಾ ತಂಡಕ್ಕೆ ಪತ್ತೆಯಾಗಿದೆ.