ದೆಹಲಿ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅನಾಹುತ: ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಜೀವ ದಹನ!

ದೆಹಲಿಯ ಕರೋಲ್ ಬಾಗ್ ಪ್ರದೇಶದ ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಜೀವ ದಹನವಾಗಿದ್ದರೆ ಇನ್ನೊಬ್ಬರು ಗಂಬೀರ ಗಾಯಗೊಂಡಿದ್ದಾರೆ.
ದೆಹಲಿ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ
ದೆಹಲಿ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ
ನವದೆಹಲಿ: ದೆಹಲಿಯ ಕರೋಲ್ ಬಾಗ್ ಪ್ರದೇಶದ ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಜೀವ ದಹನವಾಗಿದ್ದರೆ ಇನ್ನೊಬ್ಬರು ಗಂಬೀರ ಗಾಯಗೊಂಡಿದ್ದಾರೆ.
ಮಧ್ಯಾಹ್ನ 12.30ರ ಸುಮಾರಿಗೆ ಸಂಭವಿಸ್ದ ಘಟನೆಯಲ್ಲಿ ಸಾವನ್ನಪ್ಪಿರುವ ಕಾರ್ಮಿಕರನ್ನು ಬಗಾನ್ ಪ್ರಸಾದ್ ( (55), ಆರ್.ಎಂ ನರೇಶ್ (40), ಆರತಿ (20) ಮತ್ತು ಆಶಾ (40) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳಲ್ಲಿ ಅಗ್ನಿಶಾಮಕ ತಂಡದ ಸಿಬ್ಬಂದಿ ಧಾವಿಸಿದ್ದು ಬೆಂಕಿ ನಂದಿಸುವ ಪ್ರಯತ್ನದಲ್ಲಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದಿಲ್ಲ. ದೆಹಲಿಯಲ್ಲಿಇಂತಹಾ ಬೆಂಕಿ ಅನಾಹುತ ಕಳೆದ ಎರಡು ದಿನಗಳಲ್ಲಿ ಎರಡನೇ ಬಾರಿಗೆ ನಡೆಯುತ್ತಿದೆ. ಇದಕ್ಕೆ ಮುನ್ನ ಶನಿವಾರ ದೆಹಲಿಯ ರೆಸ್ಟೋರೆಂಟ್ ಒಂದರಲ್ಲಿ ಸಹ ಬೆಂಕಿ ಅನಾಹುತ ಸಂಭವಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com