ಈ ಬಗ್ಗೆ ತೆಲುಗು ದೇಶಂ ಪಕ್ಷದ ಸಂಸದರೊಬ್ಬರು ಮಾಹಿತಿ ನೀಡಿದ್ದು, 'ಬಿಜೆಪಿಯ ಎಲ್ಲಾ ವಿರೋಧಿ ಪಕ್ಷಗಳೊಂದಿಗೆ ದೆಹಲಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ವನ್ನು ಸಿದ್ಧಗೊಳಿಸುತ್ತೇವೆ. ಸಿಎಂಪಿ ಸಿದ್ಧವಾದಾಗ ಎಲ್ಲ ವಿರೋಧ ಪಕ್ಷಗಳು ಸೇರಿ ಕೇಂದ್ರೀಯ ಏಜೆನ್ಸಿಗಳಿಗೆ ತಮ್ಮ ತಮ್ಮ ರಾಜ್ಯದಲ್ಲಿ ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸುವಂತೆ ಕೇಂದ್ರೀಯ ಏಜೆನ್ಸಿಗಳಿಗೆ ಸೂಚನೆ ನೀಡಲಿವೆ. ಈ ಮೂಲಕ ಕೇಂದ್ರದ ರಾಜಕೀಯ ಅಜೆಂಡಾವನ್ನು ಹತ್ತಿಕ್ಕುವುದು ನಮ್ಮ ಉದ್ದೇಶ. ಬಳಿಕ ಎಲ್ಲ ಪಕ್ಷಗಳು ( ಬಿಜೆಪಿ ವಿರೋಧಿ) ಮತ್ತೊಂದು ಸಮಾಲೋಚನಾ ಸಭೆ ನಡೆಸಲಿವೆ. ಅಗತ್ಯವಿದ್ದರೆ ಮತ್ತು ಒಮ್ಮತವಾದರೆ, ಆದಾಯ ತೆರಿಗೆ ಮತ್ತು ಇಡಿ ಅಧಿಕಾರಿಗಳನ್ನು ಮೊಟಕುಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಈ ಬಗ್ಗೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.