ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ವರಿಷ್ಠಾಧಿಕಾರಿಗಳು, ಪಂಜಾಬ್ ಪ್ರಾಂತ್ಯದಿಂದ ಇಬ್ಬರು ಉಗ್ರರು ನುಸುಳಿದ್ದಾರೆ. ಪ್ರಸ್ತುತ ರಾಷ್ಟ್ರರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದು, ಈಗಾಗಲೇ ರಾಜಧಾನಿ ತಲುಪಿರುವ ಶಂಕೆ ಇದೆ. ಹೀಗಾಗಿ ಸಾರ್ವಜನಿಕರ ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ.