ಮುಖ್ಯಮಂತ್ರಿಗಳು ಸಾರ್ವಜನಿಕ ಅಹವಾಲು ಸ್ವೀಕಾರ ನಿರ್ವಹಣಾ ವ್ಯವಸ್ಥೆ(ಪಿಜಿಎಂಎಸ್) ನಲ್ಲಿ ಮಹಿಳೆ ಹಾಗೂ ಪುರುಷರನ್ನು ಪ್ರತ್ಯೇಕವಾಗಿ ತಪಾಸಣೆ ಮಾಡಲಾಗುತ್ತದೆ. ಅದರ ಹೊರತಾಗಿಯೂ ಸಹ ಮುಖ್ಯಮಂತ್ರಿಗಳ ಮೇಲೆ ದಾಳಿ ನಡೆದಿದೆ. ದೆಹಲಿಯಲ್ಲಿ ಮುಖ್ಯಮಂತ್ರಿಗೂ ಸುರಕ್ಷತೆ ಇಲ್ಲದಂತಾಗಿದೆ. ಇದು ಗಂಭೀರವಾದ ಭದ್ರತಾ ವೈಫಲ್ಯ ಎಂದು ಆಮ್ ಆದ್ಮಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಹಾಗೂ ದೆಹಲಿ ಪೊಲೀಸರ ಷಡ್ಯಂತ್ರದಿಂದ ಹೀಗಾಗಿದೆ ಎಂದು ಆಪ್ ಆರೋಪಿಸಿದೆ.