'ಆಡಳಿತದ ಪುನಃ ಪ್ರತಿಷ್ಠಾಪನೆಗಾಗಿ ಜನರ ಪಾದಯಾತ್ರೆ' ಎಂಬ ಘೋಷವಾಕ್ಯದೊಂದಿಗೆ ಸುಮಾರು ಒಂದು ಕಿಲೋಮೀಟರ್ ಪಾದಯಾತ್ರೆ ನಡೆಸಿ, ಪರಿಕ್ಕರ್ ರಾಜೀನಾಮೆಗೆ 48 ಗಂಟೆಗಳ ಗಡುವು ನೀಡಲಾಗಿದೆ. ಈ ಪಾದಯಾತ್ರೆಗೆ ಕಾಂಗ್ರೆಸ್ ಹೊರತುಪಡಿಸಿ, ಎನ್ಸಿಪಿ ಹಾಗೂ ಶಿವಸೇನೆ ಕೂಡಾ ಬೆಂಬಲ ಸೂಚಿಸಿದ್ದು, ಸಾಮಾಜಿಕ ಕಾರ್ಯಕರ್ತರು ಮತ್ತು ಸ್ವಯಂಸೇವಾ ಸಂಸ್ಥೆಗಳು ಈ ಪಾದಯಾತ್ರೆ ಆಯೋಜಿಸಿದ್ದವು.