ದೈನಿಕ್ ಭಾಸ್ಕರ್ ವರದಿಯ ಪ್ರಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸನತ್ ಜಯಸೂರ್ಯ ಅವರನ್ನು ಮುಂಬೈ ಗೆ ಕರೆಸಿ ವಿಚಾರಾಣೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಪ್ರಕರಣದಲ್ಲಿ ಶಾಮೀಲಾಗಿರುವ ಇನ್ನೂ ಇಬ್ಬರು ಕ್ರಿಕೆಟಿಗರನ್ನು ಡಿ.2 ರಂದು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಭಾರತದ ಅಧಿಕಾರಿಗಳು ಈಗಾಗಲೇ ಶ್ರೀಲಂಕಾ ಸರ್ಕಾರಕ್ಕೆ ಮಾಹಿತಿ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಆಗ್ರಹಿಸಿದ್ದಾರೆ.